ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣ:ಬಾಲಕಿ ಮತ್ತು ಟ್ಯಾಂಕರ್ ಚಾಲಕನ ಶವ ಪತ್ತೆ..!

01:00 PM Jul 18, 2024 IST | Bcsuddi
Advertisement

ತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಳೆದ ಎರಡು ದಿನಗಳ ಹಿಂದೆ ಗುಡ್ಡ ಕುಸಿದು ಹಲವರು ಮಣ್ಣಿನ ಅಡಿ ಸಿಲುಕಿ ಸಾವನ್ನಪ್ಪಿದ್ದರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಬಾಲಕಿ ಅವಂತಿಕ ಹಾಗೂ ಇದೀಗ ಟ್ಯಾಂಕರ್ ಚಾಲಕನ ಶವ ಪತ್ತೆಯಾಗಿದೆ.

Advertisement

 

ಹೌದು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲ ತಾಲೂಕಿನ ಮಂಜಗುಣಿ ಬಳಿ ಮತ್ತೊಂದು ಶವ ಪತ್ತೆಯಾಗಿದೆ. ತಮಿಳುನಾಡು ಮೂಲದ ಚಾಲಕ ಚಿನ್ನ (55) ಶವ ಪತ್ತೆಯಾಗಿದೆ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೂ 6 ಜನರ ಮೃತದೇಹ ಪತ್ತೆಯಾಗಿವೆ.

ಅಲ್ಲದೆ ಇಂದು ಬೆಳಿಗ್ಗೆ ಘಟನೆಯಲ್ಲಿ ಮಣ್ಣಿನೊಂದಿಗೆ ಕೊಚ್ಚಿ ಹೋಗಿದ್ದ ಒಂದೇ ಕುಟುಂಬದ ನಾಲ್ವರ ಮೃತ ದೇಹ ನಿನ್ನೆ ಪತ್ತೆಯಾಗಿತ್ತು. ಇದೀಗ ಇಂದು ಬೆಳಿಗ್ಗೆ 5 ವರ್ಷದ ಬಾಲಕಿ ಅವಂತಿಕ ಮೃತದೇಹ ಕೂಡ ಪತ್ತೆಯಾಗಿದೆ. ಶವವನ್ನು ಗೋಕರ್ಣದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವನಿಸಲಾಗಿದೆ. ಹೆದ್ದಾರಿಯ ಮೇಲಿರುವ ಮಣ್ಣು ತೆರವು ಕಾರ್ಯಾಚರಣೆ ಇದೀಗ ನಡೆದಿದ್ದು, ಇನ್ನು ಉಳಿದವರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

Advertisement
Next Article