ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಪೊಲೀಸ್‌ ದಾಳಿ

09:41 AM Nov 23, 2023 IST | Bcsuddi
Advertisement

ಬೆಂಗಳೂರು:ಸಚಿವ ಜಮೀರ್‌ ಅಹ್ಮದ್‌ ಖಾನ್‌ ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

Advertisement

ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು.

ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್‌ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರಕ್ಕೆ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ

Advertisement
Next Article