ಅಟ್ಟಾಡಿಸಿದ ಕಾಡಾನೆ - ಬೈಕ್ ಬಿಟ್ಟು ಮರವೇರಿ ಪಾರಾದ ಆರಣ್ಯ ಇಲಾಖೆ ಸಿಬ್ಬಂದಿ
02:33 PM Jan 15, 2024 IST | Bcsuddi
Advertisement
ಹಾಸನ: ಕಾಡಾನೆಯನ್ನು ಟ್ರ್ಯಾಕ್ ಮಾಡುತ್ತಿದ್ದ ವೇಳೆ ಕಾಫಿ ತೋಟದೊಳಗೆ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿಯನ್ನು ಒಂಟಿಸಲಗವೊಂದು ಹಿಮ್ಮೆಟ್ಟಿಸಿದ ಘಟನೆ ಸಕಲೇಶಪುರ ತಾಲ್ಲೂಕಿನ, ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆನೆ ಕಾರ್ಯಪಡೆ ಸಿಬ್ಬಂದಿ ಕಾಡಾನೆಗಳ ಚಲನವಲನ ಗಮನಿಸುತ್ತಿದ್ದ ವೇಳೆ ಕರಡಿ ಹೆಸರಿನ ಒಂಟಿಸಲಗ ಘೀಳಿಡುತ್ತಾ ಇಟಿಎಫ್ ಸಿಬ್ಬಂದಿಯನ್ನು ಅಟ್ಟಿಸಿಕೊಂಡು ಹೋಗಿದೆ. ತಕ್ಷಣ ಬೈಕ್ ಬಿಟ್ಟು ಓಡಿ ಹೋಗಿ ಇಟಿಎಫ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೆಲಕಾಲ ಕಾಫಿ ಗಿಡದ ಮರೆಯಲ್ಲಿ ನಿಂತ ಕಾಡಾನೆ ಮುಂದೆ ಸಾಗಿದೆ. ಮರದ ಮೇಲೆ ಕುಳಿತು ಕಾಡಾನೆಯ ವಿಡಿಯೋವನ್ನು ಸಿಬ್ಬಂದಿ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ ಎನ್ನಲಾಗಿದೆ
Advertisement