For the best experience, open
https://m.bcsuddi.com
on your mobile browser.
Advertisement

'ಅಧಿಕಾರಿಗಳ ವರ್ಗಾವಣೆ ಮನವಿ ಪುರಸ್ಕರಿಸುವುದಿಲ್ಲ'- ಸಿಎಂ ಸಿದ್ದರಾಮಯ್ಯ

04:05 PM Jun 21, 2024 IST | Bcsuddi
 ಅಧಿಕಾರಿಗಳ ವರ್ಗಾವಣೆ ಮನವಿ ಪುರಸ್ಕರಿಸುವುದಿಲ್ಲ   ಸಿಎಂ ಸಿದ್ದರಾಮಯ್ಯ
Advertisement

ಬೆಂಗಳೂರು: ಯಾವುದೇ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು. ಸಚಿವರ ಒತ್ತಾಯಕ್ಕೆ ಸಿದ್ದರಾಮಯ್ಯ ಅವರು, ಕಳೆದ ವರ್ಷ ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆಗಳು ಬಂದಿದ್ದವು. ಹೀಗಾಗಿ ಈ ವಿಚಾರವನ್ನು ಕೈಗೆತ್ತಿಕೊಳ್ಳದಿರುವುದು ಜಾಣತನ. ಈ ವಿಷಯ ಇಲ್ಲಿಗೆ ಬಿಟ್ಟು ಬಿಡಿ ಎಂದರು.

ಅಧಿಕಾರಿಗಳ ವರ್ಗ-1 ಮತ್ತು ಇದರ ಮೇಲಿನ ಅಧಿಕಾರಿಗಳ ವರ್ಗಾವಣೆಯನ್ನು ಸಿಎಂ ನಿರ್ವಹಿಸುತ್ತಾರೆ, ಆದರೆ ಕೆಳ ಹಂತದ ಅಧಿಕಾರಿಗಳ ವರ್ಗಾವಣೆಯನ್ನು ಸಚಿವರು ಮತ್ತು ಶಾಸಕರು ನಡೆಸುತ್ತಾರೆ. ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಸುಮಾರು ಶೇ. 6 ರಿಂದ 8 ರಷ್ಟು ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಮಾಡಲಾಗುತ್ತದೆ. ಆದರೆ, ಈ ವರ್ಷ ಜೂ.6 ರತನಕ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರವು ವರ್ಗಾವಣೆ ಮಾಡಿಲ್ಲ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಅಧಿಕಾರಿಗಳ ವರ್ಗಾವಣೆಗೆ ಭಾರಿ ಒತ್ತಡ ಹಾಕಲಾಗುತ್ತಿದೆ.

Advertisement

Author Image

Advertisement