ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಅನಂತ್‌ ಕುಮಾರ್ ಬಂಧನ ಮಾಡೋದು ಪೊಲೀಸರ ತೀರ್ಮಾನ' - ಪರಮೇಶ್ವರ್ ಸ್ಪಷ್ಟನೆ

04:14 PM Jan 16, 2024 IST | Bcsuddi
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್‌ಕುಮಾರ್ ಹೆಗಡೆ ಅವರನ್ನು ಬಂಧನ ಮಾಡುವುದು ಬಿಡುವುದು ಸ್ಥಳೀಯ ಪೊಲೀಸರ ನಿರ್ಧಾರ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

Advertisement

ಸಂಸದರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಂಸದರ ಮೇಲೆ ಎಫ್‌ಐಆರ್ ಆಗಿದ್ದು, ಪೊಲೀಸರು ಸಾಕ್ಷ್ಯ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ಅದಾದ ಮೇಲೆ ಮುಂದಿನ ಕ್ರಮ ಏನು ಆಗಬೇಕೋ ಅದು ಕಾನೂನು ರೀತಿ ಆಗುತ್ತದೆ ಎಂದರು.

ಇನ್ನು ನಾವು ಗೃಹ ಇಲಾಖೆಯಿಂದ ಯಾವುದೇ ಡೈರೆಕ್ಷನ್ ಕೊಡೋದಿಲ್ಲ. ಅವರನ್ನು ಅರೆಸ್ಟ್ ಮಾಡಿ, ಬಿಡಿ ಅಂತ ನಾನು ಯಾವತ್ತೂ ಯಾರಿಗೂ ಹೇಳಿಲ್ಲ. ಹೇಳೋದು ಇಲ್ಲ. ಸ್ಥಳೀಯ ಪೋಲೀಸರು ಯಾವ ಸೆಕ್ಷನ್ ಹಾಕಬೇಕೋ ಆ ಸೆಕ್ಷನ್ ಹಾಕಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

Advertisement
Next Article