For the best experience, open
https://m.bcsuddi.com
on your mobile browser.
Advertisement

ಅನ್ನ ಭಾಗ್ಯದ ಜೊತೆ ನಗದು ಬದಲು ದಿನಿಸಿ ಕಿಟ್ ವಿತರಣೆಗೆ ಸರಕಾರ ಸಜ್ಜು.!

07:53 AM Aug 29, 2024 IST | BC Suddi
ಅನ್ನ ಭಾಗ್ಯದ ಜೊತೆ ನಗದು ಬದಲು ದಿನಿಸಿ ಕಿಟ್ ವಿತರಣೆಗೆ ಸರಕಾರ ಸಜ್ಜು
Advertisement

ಬೆಂಗಳೂರು:ಹೌದು ಇನ್ಮುಂದು  ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ ಅಕ್ಕಿ ಜತೆಗೆ ನೀಡುತ್ತಿರುವ ನಗದು ಬದಲು ದಿನಸಿ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.!

ಅಡುಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ದಿನಸಿ ಕಿಟ್ನಲ್ಲಿ ಇರಲಿದೆ. ಈ ಕುರಿತು ಆಹಾರ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೊಳಿಸಲು ಸಿದ್ಧತೆ ನಡೆದಿದೆ.

Advertisement

ಅನ್ನಭಾಗ್ಯದ ಗ್ಯಾರಂಟಿಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ಘೋಷಿಸಿತ್ತು. ಅಷ್ಟು ಪ್ರಮಾಣದ ಅಕ್ಕಿ ಲಭ್ಯವಾಗದೇ ಇದ್ದಾಗ, ಐದು ಕೆ.ಜಿ ಅಕ್ಕಿ ಜತೆಗೆ, ಉಳಿದ ಐದು ಕೆ.ಜಿ ಲೆಕ್ಕದಲ್ಲಿ ನಗದು ನೀಡುವ ಯೋಜನೆ ಜಾರಿಗೊಳಿಸಿತ್ತು. ನಗದಿನ ಬದಲು ದಿನಸಿ ನೀಡುವ ಯೋಜನೆ ಜಾರಿಗೆ ಬರಲಿದೆಯಂತೆ

Tags :
Author Image

Advertisement