For the best experience, open
https://m.bcsuddi.com
on your mobile browser.
Advertisement

ಅಬಕಾರಿ ನೀತಿ ಕೇಸ್‌: ನಿಯಮಿತ ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋದ ಕೇಜ್ರಿವಾಲ್

04:09 PM May 30, 2024 IST | Bcsuddi
ಅಬಕಾರಿ ನೀತಿ ಕೇಸ್‌  ನಿಯಮಿತ ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋದ ಕೇಜ್ರಿವಾಲ್
Advertisement

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರುವಾರ ರೋಸ್ ಅವೆನ್ಯೂ ಕೋರ್ಟ್‌ಗೆ ಮೆಟ್ಟಿಲೇರಿದ್ದಾರೆ.

ಕೇಜ್ರಿವಾಲ್ ಅವರ ಜಾಮೀನು ಅವಧಿಯನ್ನು ಏಳು ದಿನಗಳ ವಿಸ್ತರಣೆಗೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದ ನಂತರ ಅವರು ದೆಹಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಲೋಕಸಭೆ ಚುನಾವಣೆಯ ಕೊನೆಯ ಮತದಾನದ ದಿನವಾದ ಜೂನ್ 1 ರವರೆಗೆ ಅವರು ಪ್ರಸ್ತುತ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಇದ್ದಾರೆ.

Advertisement

Author Image

Advertisement