ಅಮರನಾಥ್ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ
09:30 AM Aug 12, 2024 IST | BC Suddi
Advertisement
ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ.
ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳು ರದ್ದಾಗಿವೆ ಎರಡೂ ಮಾರ್ಗಗಳಲ್ಲಿ ಯಾತ್ರೆ ಸ್ಥಗಿತಗೊಂಡಿದೆ. ಬುಧವಾರ ನಿರ್ವಹಣಾ ಕಾರ್ಯಕ್ಕಾಗಿ ಪಹಲ್ಗಾಮ್ ಮಾರ್ಗವನ್ನು ಮುಚ್ಚಲಾಗಿತ್ತು. ಭಾನುವಾರ ಅಮರನಾಥ ಯಾತ್ರೆಯ ಪಹಲ್ಗಾಮ್ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಭಿದುರಿ ಹೇಳಿದ್ದಾರೆ.
ಮಳೆಯ ಕಾರಣ ಯಾತ್ರಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಸೋಮವಾರ ಬಾಲ್ಟಾಲ್ ಮಾರ್ಗದಿಂದ ಯಾವುದೇ ಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
Advertisement