ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿದ ಸಂಸದ H.D ಕುಮಾರಸ್ವಾಮಿ..!

12:29 PM Jun 05, 2024 IST | Bcsuddi
Advertisement

ನವದೆಹಲಿ : ಮಂಡ್ಯದಲ್ಲಿ ಗೆದ್ದು ಬೀಗಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ಬುಲಾವ್ ನೀಡಿದ್ದು, ಈ ಹಿನ್ನೆಲೆ ಹೆಚ್ಡಿಕೆ ಇಂದು ದೆಹಲಿಗೆ ಹಾರಿದ್ದಾರೆ.

Advertisement

ಇಂದು ಸಂಜೆ ಖಾಸಗಿ ಹೋಟೆಲ್ ನಲ್ಲಿ ಎನ್ ಡಿ ಎ ಮಿತ್ರಪಕ್ಷಗಳ ಸಣೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ದೆಹಲಿಯ ಬಿಜೆಪಿ ಕಚೇರಿಗೆ ಬಂದು ಮಾತನಾಡುವಂತೆ ಹೆಚ್ ಡಿ ಕುಮಾರಸ್ವಾಮಿಗೆ ಅಮಿತ್ ಶಾ ಆಹ್ವಾನ ನೀಡಿದ್ದರು. ಗೆದ್ದ ಅಭ್ಯರ್ಥಿಗಳ ಜೊತೆ ಅಮಿತ್ ಶಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಜಯಭೇರಿ ಸಾಧಿಸಿದ್ದಾರೆ.

Advertisement
Next Article