ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

---ಅಮುಗಿದೇವಯ್ಯ  ಅವರ ವಚನ

07:32 AM Nov 06, 2023 IST | Bcsuddi
Advertisement

 

Advertisement

 ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

: ಶಿವನ ನೆನೆದಡೆ ಭವ ಹಿಂಗೂದೆಂಬ

ವಿವರಗೇಡಿಗಳ ಮಾತ ಕೇಳಲಾಗದು.

ಹೇಳದಿರಯ್ಯಾ, ಜ್ಯೋತಿಯ ನೆನೆದಡೆ ಕತ್ತಲೆ ಕೆಡುವುದೆ?

ಇಷ್ಟಾನ್ನವ ನೆನೆದಡೆ ಹೊಟ್ಟೆ ತುಂಬುವುದೆ?

ರಂಭೆಯ ನೆನೆದಡೆ ಕಾಮದ ಕಳವಳವಡಗುವುದೆ ಅಯ್ಯಾ?

ನೆನೆದರಾಗದು, ನಿಜದಲ್ಲಿ ನಿರ್ಧರಿಸಿ ತಾನು ತಾನಾಗದನ್ನಕ್ಕರ,ಸದ್ಗುರು ಸಿದ್ಧಸೋಮನಾಥಲಿಂಗನ ನೆನೆಯಬಾರದು.

-ಅಮುಗಿದೇವಯ್ಯ

 

Tags :
---ಅಮುಗಿದೇವಯ್ಯ  ಅವರ ವಚನ
Advertisement
Next Article