For the best experience, open
https://m.bcsuddi.com
on your mobile browser.
Advertisement

'ಅರಸು ಅವರಿಗೂ ಭಾರತ ರತ್ನ ನೀಡಿ': ಡಿಸಿಎಂ ಡಿಕೆ ಶಿವಕುಮಾರ್‌

05:41 PM Jan 24, 2024 IST | Bcsuddi
 ಅರಸು ಅವರಿಗೂ ಭಾರತ ರತ್ನ ನೀಡಿ   ಡಿಸಿಎಂ ಡಿಕೆ ಶಿವಕುಮಾರ್‌
Advertisement

ಬೆಂಗಳೂರು: ದೀನ ದಲಿತರ ಧ್ವನಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರಿಗೆ ಭಾರತ ರತ್ನ ನೀಡಬೇಕೆಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರು ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿರುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹಾಗೆಯೇ ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರಿಗೂ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ದೀನ ದಲಿತರ ಧ್ವನಿಯಾಗಿದ್ದ ಡಿ. ದೇವರಾಜ ಅರಸು ಅವರಿಗೆ ಭಾರತ ರತ್ನ ನೀಡಬೇಕೆಂಬುದು ಕನ್ನಡಿಗರ ಬೇಡಿಕೆಯಾಗಿದೆ. ಇದನ್ನು ಭಾರತ ಸರ್ಕಾರ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.

Advertisement

Author Image

Advertisement