ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದುರಂತ - ವಿದ್ಯುತ್ ಶಾಕ್ಗೆ ದಸರಾ ಆನೆ ‘ಅಶ್ವತ್ಥಾಮ’ ಸಾವು..!
05:35 PM Jun 11, 2024 IST | Bcsuddi
Advertisement
ಮೈಸೂರು : ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಘಟನೆ ಇಂದು ನಡೆದಿದೆ. ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. 2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ನಂತರ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು. ಮೈಸೂರಿನಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಮೃತಪಟ್ಟ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಹಚ್ಚ ಹಸಿರಾಗಿದೆ. ಈ ಬೆನ್ನಲ್ಲೇ ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಘಟನೆ ನಡೆದಿದೆ.