ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅರ್ಜುನ ಆನೆ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ಸಂಗ್ರಹಿಸಿದ ಆರೋಪಿ; ನಟ ದರ್ಶನ್‌ಗೂ ದೋಖಾ

11:21 AM May 27, 2024 IST | Bcsuddi
Advertisement

ಹಾಸನ: ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣ ಮಾಡುವ ವಿಚಾರವಾಗಿ ವ್ಯಕ್ತಿಯೋರ್ವ ಅಕ್ರಮವಾಗಿ ಲಕ್ಷಾಂತರ ರೂ. ಹಣ ಸಂಗ್ರಹಿಸಿರುವ ಬಗ್ಗೆ ದೂರು ದಾಖಲಾಗಿದೆ.

Advertisement

ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್ ಎಂಬಾತ ಅರ್ಜುನ ಪಡೆ ಎಂಬ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿದ್ದಾನೆ. ಈ ಗ್ರೂಪ್ ನಲ್ಲಿ ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ನೀಡುವಂತೆ ಧನಸಂಗ್ರಹ ಮಾಡುತ್ತಿದ್ದಾನೆ. ಈತನ ಮಾತನ್ನು ನಂಬಿದ ಹಲವರು ಧನ ಸಹಾಯ ಮಾಡುತ್ತಿದ್ದಾರೆ. ಇದರಿಂದಾಗಿ ಆರೋಪಿ ಖಾತೆಗೆ ಲಕ್ಷಾಂತರ ಹಣ ಜಮೆ ಆಗಿದೆ ಎಂದು ದೂರಲಾಗಿದೆ.

ಆರೋಪಿ ನವೀನ್ ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ಸಹಾಯ ಮಾಡುವಂತೆ ನಟ ದರ್ಶನ್ ಅವರ ಪಿಎಯನ್ನು ಕೇಳಿದ್ದಾನೆ. ಇದನ್ನು ನಂಬಿದ ಅವರು ಸ್ಮಾರಕ ನಿರ್ಮಾಣಕ್ಕೆ ಕಲ್ಲುಗಳನ್ನು ನೀಡಿದ್ದಾರೆ. ಈ ಕಲ್ಲುಗಳನ್ನು ಆತ ಅರಣ್ಯ ಇಲಾಖೆಯವರಿಗೆ 30 ಸಾವಿರ ರೂ.ಗೆ ಮಾರಾಟ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

 

Advertisement
Next Article