ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಆಂಧ್ರಪ್ರದೇಶದ ನೂತನ ಡಿಸಿಎಂ ಆಗಿ ಪವನ್ ಕಲ್ಯಾಣ್ ನೇಮಕ

09:35 AM Jun 15, 2024 IST | Bcsuddi
Advertisement

ಅಮರಾವತಿ: ಆಂಧ್ರಪ್ರದೇಶದ ನೂತನ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಎಂದು ಸಿಎಂ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

Advertisement

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ನಾಯ್ಡು, ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾದ ಪವನ್ ಕಲ್ಯಾಣ್ ಅವರಿಗೆ ಅಭಿನಂದನೆಗಳು. ಕ್ಯಾಬಿನೆಟ್‌ನಲ್ಲಿರುವ ನನ್ನ ಎಲ್ಲ ಸಹೋದ್ಯೋಗಿಗಳಿಗೆ ಅವರ ಖಾತೆಗಳನ್ನು ನಿಯೋಜಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಒಟ್ಟಾಗಿ ನಾವು ಆಂಧ್ರಪ್ರದೇಶದ ಜನರಿಗೆ ಸೇವೆ ಸಲ್ಲಿಸಲು ಮತ್ತು ಜನಪರ ಆಡಳಿತದ ಯುಗವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದ್ದೇವೆ. ಸಚಿವರಾಗಿ ನಮ್ಮ ಜನರ ನಿರೀಕ್ಷೆಗಳನ್ನು ಈಡೇರಿಸಲು ನೀವು ಶ್ರಮಿಸುತ್ತೀರಿ ಎಂಬ ವಿಶ್ವಾಸ ನನಗಿದೆ. ಸೇವೆ ಮತ್ತು ಭಕ್ತಿಯ ಈ ಪಯಣವನ್ನು ಆರಂಭಿಸುತ್ತಿರುವ ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು ಎಂದು ಸಿಎಂ ತಿಳಿಸಿದ್ದಾರೆ.

ಪವನ್‌ ಕಲ್ಯಾಣ್‌ ಅವರಿಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ, ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಗಳನ್ನು ನೀಡಲಾಗಿದೆ.

 

Advertisement
Next Article