For the best experience, open
https://m.bcsuddi.com
on your mobile browser.
Advertisement

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಲೋಕಯುಕ್ತ ಬಲೆಗೆ.!

10:04 AM Jun 15, 2024 IST | Bcsuddi
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಲೋಕಯುಕ್ತ ಬಲೆಗೆ
Advertisement

ಬೆಂಗಳೂರು:  ಬೆಂಗಳೂರು ನಗರ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಪ್ರೀತಿ ಚಂದ್ರಶೇಖರ್ ಮತ್ತು ಮಧ್ಯವರ್ತಿ ರಮೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿ ರದ್ದುಗೊಳಿಸಲಾಗಿತ್ತು. ಈ ರದ್ದತಿ ಆದೇಶ ಹಿಂಪಡೆಯಲು ಅಂಗಡಿಯ ಮಾಲೀಕರಿಗೆ ₹ 70 ಸಾವಿರ ಲಂಕ್ಕೆ ಬೇಡಿಕೆಯಿಟ್ಟಿದ್ದ ಪ್ರೀತಿ ಚಂದ್ರಶೇಖರ್, ಮುಂಗಡವಾಗಿ ₹50 ಸಾವಿರ ಪಡೆದುಕೊಂಡಿದ್ದರು. ಈ ಕುರಿತು ಅಂಗಡಿಯ ಮಾಲೀಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

Advertisement

ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು, ಬಾಕಿ ₹ 20 ಸಾವಿರ ಪಡೆಯುತ್ತಿದ್ದ ಮಧ್ಯವರ್ತಿ ರಮೇಶ್ ಎಂಬಾತನನ್ನು ವಶಕ್ಕೆ ಪಡೆದರು. ಬಳಿಕ ಆತ ನೀಡಿದ ಮಾಹಿತಿ ಆಧರಿಸಿ ಪ್ರೀತಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ.

Tags :
Author Image

Advertisement