For the best experience, open
https://m.bcsuddi.com
on your mobile browser.
Advertisement

ಇಂದಿನಿಂದ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ವಿಧಿಗಳಿಗೆ ಚಾಲನೆ

10:36 AM Jan 16, 2024 IST | Bcsuddi
ಇಂದಿನಿಂದ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ವಿಧಿಗಳಿಗೆ ಚಾಲನೆ
Advertisement

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಏತನ್ಮಧ್ಯೆ , ಶ್ರೀ ರಾಮ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ವಿಧಿಗಳಿಗೆ ಇಂದಿನಿಂದ ಚಾಲನೆ ಸಿಗಲಿದೆ.

ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಜ.18 ರಂದು ರಾಮಲಲ್ಲಾ ನ ವಿಗ್ರಹವನ್ನು ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಜ.22 ರಂದು ಮಧ್ಯಾಹ್ನ 12:20 ರ ವೇಳೆಗೆ ಅಭಿಜಿನ್ ಮಹೂರ್ತದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ, ಮಧ್ಯಾಹ್ನ 1 ಗಂಟೆಗೆ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್, ರಾಜ್ಯಪಾಲ ಆನಂದಿ ಬೆನ್ ಪಟೇಲ್, ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಮತ್ತು ಎಲ್ಲಾ ಟ್ರಸ್ಟಿಗಳು ಗರ್ಭಗುಡಿಯಲ್ಲಿ ಉಪಸ್ಥಿತರಿರುವರು ಎಂದು ಚಂಪತ್ ರಾಯ್ ತಿಳಿಸಿದ್ದಾರೆ.

Advertisement

Author Image

Advertisement