For the best experience, open
https://m.bcsuddi.com
on your mobile browser.
Advertisement

'ಇಂದು ಇಂಡಿಯಾ ಒಕ್ಕೂಟ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ'- ಉದ್ಧವ್ ಠಾಕ್ರೆ

10:01 AM Jun 05, 2024 IST | Bcsuddi
 ಇಂದು ಇಂಡಿಯಾ ಒಕ್ಕೂಟ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ   ಉದ್ಧವ್ ಠಾಕ್ರೆ
Advertisement

ನವದೆಹಲಿ: ಇಂದು ಇಂಡಿಯಾ ಒಟ್ಟೂಟ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ನಮ್ಮ ಇಂಡಿಯಾ ಒಟ್ಟೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಅಂತ್ಯ ಮಾಡಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧಾರ ಮಾಡಿದ್ದೆವು. ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುತ್ತೇವೆ. ಎಲ್ಲಾ ದೇಶಭಕ್ತರು ಮತ್ತು ಬಿಜೆಪಿಯಿಂದ ಕಿರುಕುಳಕ್ಕೊಳಗಾದವರೆಲ್ಲರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಅವರು ಕೂಡ ಬಿಜೆಪಿಯಿಂದ ಕಿರುಕುಳಕ್ಕೊಳಗಾದವರು ಎಂದು ಅವರು ಹೇಳಿದ್ದಾರೆ.

ಇಂಡಿಯಾ ಒಕ್ಕೂಟವು ಮಹಾರಾಷ್ಟ್ರದಲ್ಲಿ ಮತ್ತು ರಾಷ್ಟ್ರದಾದ್ಯಂತ ಉತ್ತಮವಾಗಿ ಕೆಲಸ ಮಾಡಿದೆ. ನಮ್ಮ ದೇಶದಲ್ಲಿ ದುರಹಂಕಾರಕ್ಕೆ ಸ್ಥಾನವಿಲ್ಲ ಎಂದು ನಾವು ತೋರಿಸಿದ್ದೇವೆ. ಸಂವಿಧಾನ ವಿರೋಧಿ ಶಕ್ತಿಗಳು, ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ದೇಶದಲ್ಲಿ ಸ್ಥಾನವಿಲ್ಲ ಎಂದರು.

Advertisement

Author Image

Advertisement