For the best experience, open
https://m.bcsuddi.com
on your mobile browser.
Advertisement

ಇಂದು ಭವಾನಿ ರೇವಣ್ಣ ನಿರೀಕ್ಷಣಾ ಭವಿಷ್ಯ ನಿರ್ಧಾರ..!

10:58 AM Jun 18, 2024 IST | Bcsuddi
ಇಂದು ಭವಾನಿ ರೇವಣ್ಣ ನಿರೀಕ್ಷಣಾ ಭವಿಷ್ಯ ನಿರ್ಧಾರ
Advertisement

ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇಂದು (ಜೂನ್ 18ರಂದು) ಪ್ರಕಟಿಸಲಿದೆ. ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಜೂನ್‌ 18) ತನ್ನ ಆದೇಶ ಪ್ರಕಟಿಸಲಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ಎಚ್‌.ಡಿ.ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಇದ್ದುದರಿಂದ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು.

Advertisement

Author Image

Advertisement