ಇಂದು ರಾಜ್ಯದ 28 ಲೋಕಸಭಾ ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ಪ್ರಕಟ
07:22 AM Jun 04, 2024 IST
|
Bcsuddi
Advertisement
Advertisement
ಬೆಂಗಳೂರು: ದೇಶದಲ್ಲಿ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜ್ಯದಲ್ಲಿಯೂ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಸಮೀಕ್ಷೆಗಳು ಸುಳ್ಳಾಗಲಿದ್ದು ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ ಎನ್ನುವ ವಿಶ್ವಾಸ ಪಕ್ಷದ ನಾಯಕರಲ್ಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಇದಕ್ಕೂ ಮೊದಲು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗುವುದು. ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಲಿದೆ. ನಂತರ ಇವಿಎಂ ಮತಗಳ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಯಾರಿಗೆ ಗೆಲುವು ಎನ್ನುವ ಕುತೂಹಲಕ್ಕೆ ತೆರೆ ಬೀಳಲಿದೆ.
Next Article