ಇಂದು ರೈತರಿಂದ ದೆಹಲಿ ಚಲೋ - ನಿಷೇಧಾಜ್ಞೆ ಜಾರಿ, ಪೊಲೀಸರಿಂದ ಬಂದೋಬಸ್ತ್
09:32 AM Feb 13, 2024 IST
|
Bcsuddi
Advertisement
ನವದೆಹಲಿ: ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗೆ ಕಾನೂನು ಜಾರಿ ಸೇರಿ ಹಲವು ಬೇಡಿಕೆಗಳ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋಗೆ ಕರೆ ನೀಡಿದ್ದು, ಇಂದು ಲಕ್ಷಾಂತರ ರೈತರು ದೆಹಲಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
Advertisement
ರೈತರ ಪ್ರತಿಭಟನೆ ಹಿನ್ನೆಲೆ ಸಿಂಘು, ಘಾಜಿಪುರ್, ಟಿಕ್ರಿ ಗಡಿಯಲ್ಲಿ ಸಂಚಾರ ನಿರ್ಬಂಧಿಸಿರುವ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ.
ಇನ್ನು ಬೃಹತ್ ಗಾತ್ರದ ಬ್ಯಾರಿಕೇಡ್, ಕಾಂಕ್ರಿಟ್ ಗೋಡೆ ನಿರ್ಮಿಸಿದ್ದು, ರಸ್ತೆಯಲ್ಲಿ ಕಬ್ಬಿಣದ ಚೂಪಾದ ರಾಡ್ಗಳನ್ನು ಹಾಕಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸಿ ದೆಹಲಿ ಸುತ್ತಲೂ ಪೊಲೀಸರು ಸುತ್ತುವರೆದಿದ್ದಾರೆ.
Next Article