ಇಂದು ಶಿವಮೊಗ್ಗಕ್ಕೆ ಪ್ರಧಾನಿ.! ಚುನಾವಣಾ ಪ್ರಚಾರಕ್ಕೆ ಚಾಲನೆ.!
07:31 AM Mar 18, 2024 IST
|
Bcsuddi
Advertisement
Advertisement
ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು ಲೋಕಸಭೆ ಚುನಾವಣೆ ಘೋಷಣೆ ನಂತರ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಪ್ರಚಾರ ಕೈಗೊಂಡಿದ್ದಾರೆ.
ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಆಸನ ವ್ಯವಸ್ಥೆ ಮಾಡಲಾಗಿದೆ. ಐದು ಲೋಕಸಭಾ ಕ್ಷೇತ್ರಗಳ ಸಂಸದರು, ಶಾಸಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ವೇದಿಕೆ ಮೇಲೆ ಬಿಜೆಪಿ ಅಭ್ಯರ್ಥಿಗಳಾದ ಬಿ.ವೈ. ರಾಘವೇಂದ್ರ, ಗಾಯತ್ರಿ ಸಿದ್ದೇಶ್ವರ, ಕೋಟ ಶ್ರೀನಿವಾಸ ಪೂಜಾರಿ, ಬೃಜೇಶ್ ಚೌಟ, ನಾಯಕರಾದ ಯಡಿಯೂರಪ್ಪ, ವಿಜಯೇಂದ್ರ, ಸಿ.ಟಿ. ರವಿ, ಆರಗ ಜ್ಞಾನೇಂದ್ರ ಮೊದಲಾದವರು ಇರಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಗುರಿಯೊಂದಿಗೆ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ ಮೋದಿ ಅವರ ಮೊದಲ ಪ್ರಚಾರ ಸಭೆ ಇದಾಗಿದ್ದು, ಭರ್ಜರಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
Next Article