ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಲಿ ಪಾಷಾಣ ಸಿಂಪಡಣೆ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು.!

07:55 AM Aug 19, 2024 IST | BC Suddi
Advertisement

 

Advertisement

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟ ಮಾಡುತ್ತಿದ್ದ ಸುಮಾರು 20 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಪುರುಷರ ವಿದ್ಯಾರ್ಥಿ ನಿಲಯದ ಊಟದ ಕೋಣೆಗೆ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಿಸಿದ್ದಾರೆ. ಇದೇ ಕೋಣೆಯಲ್ಲಿ ವಿದ್ಯಾರ್ಥಿಗಳು ಕುಳಿತು ಊಟ ಮಾಡುವಾಗ ಘಟನೆ ನಡೆದಿದ್ದು, ಅಸ್ವಸ್ಥರಾದ ವಿದ್ಯಾರ್ಥಿಗಳು ಕುಸಿದು ಬಿದ್ದು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದ್ದು, ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags :
ಇಲಿ ಪಾಷಾಣ ಸಿಂಪಡಣೆ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು.!
Advertisement
Next Article