ಈ ಎರಡು ದಿನ ನಗರಕ್ಕೆ ಶಾಂತಸಾಗರ ನೀರು ಬರಲ್ಲ.!
08:02 AM Feb 10, 2024 IST
|
Bcsuddi
Advertisement
Advertisement
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಕುಟ್ಟಿಗೆಹಳ್ಳಿ ಪಂಪ್ಹೌಸ್ನಿಂದ ಚಿತ್ರದುರ್ಗ ನಗರದವರೆಗೆ ಮಾರ್ಗ ಮಧ್ಯದಲ್ಲಿ ಮುಖ್ಯ ಕೊಳವೆ ಮಾರ್ಗದ ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಇದೇ ಫೆ.12 ರಿಂದ 14ರವರೆಗೆ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡುಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Article