ಈ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು.!
07:16 AM Apr 08, 2024 IST | Bcsuddi
Advertisement
ಬೆಂಗಳೂರು: ಗುಂಡೂರಾವ್ ಪತ್ನಿ ಟಬು ರಾವ್ ಅವರು ಸಂಜಯನಗರ ಠಾಣೆಯಲ್ಲಿ ಆರೋಗ್ಯ ಸಚಿವರಾಗಿರುವ ನನ್ನ ಪತಿ ದಿನೇಶ್ ಗುಂಡೂರಾವ್ ಹಾಗೂ ನಮ್ಮ ಕುಟುಂಬದ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ದೂರು ನೀಡಿದ್ದಾರೆ.
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಗ್ಗೆ ಏಪ್ರಿಲ್ 6ರಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದ ಶಾಸಕ ಯತ್ನಾಳ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂಬುದಾಗಿ ಹೇಳಿದ್ದರು. ಈ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ. ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.
Advertisement
ದೂರು ಸ್ವೀಕರಿಸಿರುವ ಪೊಲೀಸರು, ‘ಕೃತ್ಯ ನಡೆದಿರುವ ಸ್ಥಳದ ಆಧಾರದಲ್ಲಿ ವಿಜಯಪುರ ಜಿಲ್ಲಾ ಪೊಲೀಸರಿಗೆ ದೂರು ಹಸ್ತಾಂತರಿಸಲಾಗುವುದು ಎಂದಿದ್ದಾರೆ.