For the best experience, open
https://m.bcsuddi.com
on your mobile browser.
Advertisement

ಉಡುಪಿ: ಆರೋಪಿ ಪ್ರವೀಣ್ ಚೌಗಲೆಗೆ ನ್ಯಾಯಾಂಗ ಬಂಧನ ವಿಸ್ತರಣೆ

09:17 AM Dec 06, 2023 IST | Bcsuddi
ಉಡುಪಿ  ಆರೋಪಿ ಪ್ರವೀಣ್ ಚೌಗಲೆಗೆ ನ್ಯಾಯಾಂಗ ಬಂಧನ ವಿಸ್ತರಣೆ
Advertisement

ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಪ್ರವೀಣ್ ಚೌಗಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ಆರೋಪಿಗೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರವೀಣ್ ಚೌಗುಲೆ ನವೆಂಬರ್ 12ರಂದು ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿದ್ದ. ಈತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ನೇತೃತ್ವದಲ್ಲಿ ನವೆಂಬರ್ 14ರಂದು ಬೆಳಗಾವಿಯಲ್ಲಿ ಬಂಧಿಸಲಾಗಿತ್ತು.

Advertisement

Author Image

Advertisement