ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಉಡುಪಿ: ನರಹಂತಕ ಪ್ರವೀಣ್ ಚೌಗುಲೆ 14 ದಿನ ನ್ಯಾಯಾಂಗ ಬಂಧನಕ್ಕೆ – ಹಿರಿಯಡ್ಕ ಸಬ್ ಜೈಲ್ ಗೆ ರವಾನೆ

06:13 PM Nov 22, 2023 IST | Bcsuddi
Advertisement

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರಹಂತಕ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.

Advertisement

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದರ ಹಿನ್ನೆಲೆಯಲ್ಲಿ ಇಂದು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೀಪಾ ಅವರ ಎದುರು ಮಲ್ಪೆ ಪೊಲೀಸರು ಹಾಜರು ಪಡಿಸಿದಾಗ ಆರೋಪಿಗೆ ಡಿಸೆಂಬರ್ 5 ರ ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಕರೆ ತಂದಾಗ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಹಿರಿಯಡ್ಕ ಸಬ್ ಜೈಲ್ ಗೆ ರವಾನೆ ಮಾಡಲಾಗಿದೆ.

Advertisement
Next Article