'ಉತ್ತರಕಾಶಿ ಸುರಂಗ ರಕ್ಷಣಾ ಕಾರ್ಯಾಚರಣೆ ಟೀಮ್ವರ್ಕ್ಗೆ ಅದ್ಭುತ ಉದಾಹರಣೆ' - ಪ್ರಧಾನಿ ಮೋದಿ
09:01 AM Nov 29, 2023 IST
|
Bcsuddi
Advertisement
ನವದೆಹಲಿ: ಉತ್ತರಕಾಶಿ ಸುರಂಗ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ. ಇದು ಮಾನವೀಯತೆ, ಟೀಮ್ವರ್ಕ್ಗೆ ಅದ್ಭುತ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Advertisement
ಸುರಂಗದ ಒಳಗಡೆ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ ನಡೆಸಿದ ಕೃತಜ್ಞತೆ ಸಲ್ಲಿಸಿರುವ ಮೋದಿ, ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ಸುರಂಗದೊಳಗಿದ್ದ ಕಾರ್ಮಿಕರ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದರು. ಇನ್ನು ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಸಾಕಷ್ಟು ಪ್ರಶಂಸಿನೀಯ ಎಂದಿದ್ದಾರೆ.
Next Article