ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಉದ್ಯಮಿಗೆ ವಂಚನೆ ಪ್ರಕರಣ: ಹಾಲಶ್ರೀಗೆ ಷರುತ್ತು ಬದ್ಧ ಜಾಮೀನು

09:00 AM Nov 09, 2023 IST | Bcsuddi
Advertisement

ಬೆಂಗಳೂರು :ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಅಮೀಷ ಒಡ್ಡಿದ  ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿರುವ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

Advertisement

ಹೈಕೋರ್ಟ್ ಏಕಸದಸ್ಯ ಪೀಠದ ವತಿಯಿಂದ ಈ ಜಾಮೀನು ಮಂಜೂರು ಮಾಡಿದೆ. ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದಾಗ ತಲೆಮರೆಸಿಕೊಂಡಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದ್ರೆ ಈ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.

ಜಾಮೀನು ನೀಡದಂತೆ ಈ ಹಿಂದೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು.ಬಳಿಕ ಹಾಲಶ್ರೀ ಪರ ವಕೀಲರು, ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ, ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಮನವಿ ಮಾಡಿದ್ದರು.

ಈ ಕುರಿತು ಸುದಿರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್‌ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

Advertisement
Next Article