ಉ. ಕ. ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಜೀವ ಬಲಿ
03:09 PM Mar 03, 2024 IST | Bcsuddi
Advertisement
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ವ್ಯಕ್ತಿ ಜೀವ ಕಳೆದುಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿದೆ.
ಮೃತರನ್ನು ಶಿರಸಿ ಹತ್ತರಗಿ ನವಿಲಗಾರ ಗ್ರಾಮದ ನಿವಾಸಿ ರಾಮಚಂದ್ರಗೌಡ(68) ಎಂದು ಗುರುತಿಸಲಾಗಿದೆ. ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 47 ಮಂದಿ ಮಂಗನ ಕಾಯಿಲೆಗೆ ತುತ್ತಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಸಿದ್ಧಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಮಂಗನ ಕಾಯಿಲೆ ಇದೀಗ ಜಿಲ್ಲೆಯ ಅಂಕೊಲಾ ತಾಲೂಕಿಗೂ ಹರಡಿದೆ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಇನ್ನು ಈ ಕಾಯಿಲೆಗೆ ಲಸಿಕೆ ಇಲ್ಲದ ಕಾರಣ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
Advertisement