For the best experience, open
https://m.bcsuddi.com
on your mobile browser.
Advertisement

ಎಚ್. ಡಿ. ಕುಮಾರಸ್ವಾಮಿ ನೈತಿಕತೆ ಬಗ್ಗೆ ಏನಂತ ಪಾಠಮಾಡಿದ ಸಚಿವ ಜಮೀರ್.!

04:58 PM Aug 22, 2024 IST | BC Suddi
ಎಚ್  ಡಿ  ಕುಮಾರಸ್ವಾಮಿ ನೈತಿಕತೆ ಬಗ್ಗೆ ಏನಂತ ಪಾಠಮಾಡಿದ ಸಚಿವ ಜಮೀರ್
Advertisement

ಬೆಂಗಳೂರು: ಎಚ್. ಡಿ. ಕುಮಾರಸ್ವಾಮಿ ಗೆ ಯಾವುದೇ ನೈತಿಕತೆ ಇಲ್ಲ ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಲೋಕಾಯುಕ್ತ ತನಿಖೆ ಆಧಾರದ ಮೇಲೆ ಅಕ್ರಮ ನಡೆದಿರುವುದು ಸಾಬೀತು ನಂತರ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂ ಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್ಐಟಿ ಮನವಿ ಮಾಡಿ ಹತ್ತು ತಿಂಗಳು ಕಳೆದಿದೆ. ನಿಜವಾಗಿಯೂ ರಾಜೀನಾಮೆ ನೀಡಬೇಕಿರುವುದು ಕುಮಾರಸ್ವಾಮಿ ಎಂದರು.

Advertisement

ಸಿದ್ದರಾಮಯ್ಯ ವಿರುದ್ಧ ನೀಡಿರುವುದು ಖಾಸಗಿ ದೂರು. ಎಫ್ ಐ ಆರ್ ಆಗಿಲ್ಲ, ತನಿಖೆ ನಡೆದಿಲ್ಲ. ಆದರೆ ದೂರು ನೀಡಿದ ದಿನವೇ ನೋಟಿಸ್ ನೀಡಿರುವುದು ಎಷ್ಟು ಸರಿ. ತನಿಖೆಯಲ್ಲಿ ಅಕ್ರಮ ಸಾಬೀತು ಪ್ರಕರಣ ದಲ್ಲಿ ಕುಮಾರಸ್ವಾಮಿ ವಿರುದ್ಧ ಮೊದಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕಿತ್ತು. ನೈತಿಕತೆ ಹೊತ್ತು ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ನೂರು ಸಿದ್ದರಾಮಯ್ಯ ಬಂದರೂ ಏನೂ ಮಾಡಲಾಗದು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಅವರು ಒಬ್ಬ ಜಮೀರ್ ನನ್ನು ಫೇಸ್ ಮಾಡಲಿ ಸಾಕು ಎಂದು ಸವಾಲು ಹಾಕಿದರು.

Tags :
Author Image

Advertisement