For the best experience, open
https://m.bcsuddi.com
on your mobile browser.
Advertisement

'ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ'- ಜೆಡಿಎಸ್

01:38 PM May 28, 2024 IST | Bcsuddi
 ಒಂದು ಕೈಯ್ಯಲ್ಲಿ ಗ್ಯಾರಂಟಿ  ಇನ್ನೊಂದು ಕೈಯ್ಯಲ್ಲಿ ಸುಲಿಗೆ   ಜೆಡಿಎಸ್
Advertisement

ಬೆಂಗಳೂರು: ಬಿತ್ತನೆ ಬೀಜದ ದರ 60%ರಷ್ಟು ಹೆಚ್ಚಳವಾಗಿದೆ. ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್ ಸರ್ಕಾರ ಮಾಡಿರುವ ಘನಕಾರ್ಯ ಇದು. ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು ಎಂದು ಕೃಷಿ ಸಚಿವರ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದೆ.

ಬಿತ್ತನೆ ಬೀಜದ ಬೆಲೆ ಏರಿಕೆ ಖಂಡಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೃಷಿ ಸಚಿವರೇ ಎಲ್ಲಿದಿರಪ್ಪಾ ಎಂದು ಪ್ರಶ್ನಿಸಿದೆ. ಹಾಗೇ ಕೊಟ್ಟ ಹಾಗೆ ಕೊಟ್ಟು, ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಹೆಚ್ಚಳವಾದ ಕಾರಣ, ಮುಕ್ತ ಮಾರುಕಟ್ಟೆಯಲ್ಲಿಯೂ ಬಿತ್ತನೆ ಬೀಜದ ದರ ದುಪ್ಪಟ್ಟಾಗಿದೆ. ತಕ್ಷಣವೇ ಸರ್ಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.

Advertisement

Author Image

Advertisement