ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಒಂದೇ ಹುದ್ದೆಗೆ ಇಬ್ಬರ ಗುದ್ದಾಟ- ಅಕ್ಕಪಕ್ಕ ಕುರ್ಚಿ ಹಾಕಿ ಕುಳಿತ ಸರ್ಕಾರಿ ಅಧಿಕಾರಿಗಳು

10:20 AM Nov 24, 2023 IST | Bcsuddi
Advertisement

ಒಂದೇ ಸರ್ಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿ, ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿ ಹಾಕಿಕೊಂಡು ಕುಳಿತ ಘಟನೆ ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದಿದೆ.

Advertisement

ನಗರದ ಹೊಸಳ್ಳಿ ಕ್ರಾಸ್ ಬಳಿಯಿರುವ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಂಗಪ್ಪ ಪೂಜಾರಿ ಹಾಗೂ ಡಿ.ರಾಜಕುಮಾರ್ ಎಂಬ ಇಬ್ಬರು ಅಧಿಕಾರಿಗಳ ಮಧ್ಯೆ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಇದರಿಂದ ಇಲಾಖೆಯ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಿರುವ ಸಾರ್ವಜನಿಕರು ಒಂದೇ ಹುದ್ದೆಯಲ್ಲಿ ಇಬ್ಬರು ಅಧಿಕಾರಿಗಳನ್ನ ಕಂಡು ಗೊಂದಲಕ್ಕೆ ಸಿಲುಕಿದ್ದಾರೆ. ಸಂಗಪ್ಪ ಅವರು ಫೆ.1 ರಿಂದ ಅ.16ರ ವರೆಗೆ ಸಹಾಯಕ ನಿರ್ದೇಶಕರ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಇನ್ನೂ ರಾಜಕುಮಾರ್ ಅವರು ಇದೇ ಹುದ್ದೆಗೆ ಸರ್ಕಾರದಿಂದ ಆದೇಶ ತಂದು ಅಕ್ಟೋಬರ್ 16 ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಆದೇಶವನ್ನು ಪ್ರಶ್ನಿಸಿ ಸಂಗಪ್ಪ ಪೂಜಾರಿ ಅವರು ಅವಧಿಗೂ ಮುನ್ನವೆ ನನ್ನ ಜಾಗಕ್ಕೆ ಮತ್ತೊಬ್ಬರಿಗೆ ಆದೇಶ ಆಗಿದೆ ಎಂದು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠದ ಮೊರೆ ಹೋಗಿದ್ದರು. ಕೋರ್ಟ್ ಸಂಗಪ್ಪ ಪರ ತೀರ್ಪು ನೀಡಿ, ಹುದ್ದೆಯಲ್ಲಿ ಮುಂದೆವರಿಯುವಂತೆ ಆದೇಶ ಹೊರಡಿಸಿದೆ. ಇದೇ ವೇಳೆ ರಾಜಕುಮಾರ್ ಆಗಿರುವ ಆದೇಶವನ್ನು ಕೋರ್ಟ್ ರದ್ದು ಮಾಡಿದೆ ಎಂದು ಸಂಗಪ್ಪ ಅವರು ತಮ್ಮ ವಾದ ಮಂಡಿಸಿದ್ದಾರೆ. ನನಗೆ ಸರ್ಕಾರದಿಂದ ಆದೇಶ ಇದೆ ಎಂದು ರಾಜಕುಮಾರ್ ಅವರು ಕಚೇರಿಯಲ್ಲಿ ಕುಳಿತಿದ್ದಾರೆ.

Advertisement
Next Article