ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಒಂದೇ ಹೆಸರಿನಲ್ಲಿ ಎರಡು ಸಂಸ್ಥೆಗಳು ನೋಂದಾವಣೆ: ಉತ್ತರ ಕನ್ನಡ ಜಿಲ್ಲಾ ಅಮಚೂರ್ ಕಬಡ್ಡಿ ಅಸೋಸಿಯೇಷನ್ ನೊಂದಾವಣಿ ರದ್ದು!

06:48 PM Nov 09, 2023 IST | Bcsuddi
Advertisement

ಕಾರವಾರ: ಒಂದೇ ಹೆಸರಿನಲ್ಲಿ ಎರಡು ಸಂಘಗಳನ್ನು ನೋಂದಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಸಹಕಾರಿ ಉಪನಿಬಂಧಕರು ನಂತರ ನೋಂದಾವಣೆಗೊಂಡಿರುವ ಉತ್ತರ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಎಸೋಸಿಯೇಷನ್ ನೋಂದಾವಣೆಯನ್ನು ರದ್ದುಗೊಳಿಸಿದ್ದಾರೆ.

Advertisement

ಸಹಕಾರಿ ಸಂಘಗಳ ನೋಂದಾವಣಿ ಅಧಿನಿಯಮ 7ರ ಪ್ರಕಾರ ಉತ್ತರ ಕನ್ನಡ ಅಮೆಚೂರು ಕಬ್ಬಡಿ ಎಸೋಶಿಯೇಶನ್ ಎರಡನೇ ಸಂಘದ ನೋಂದಣಿ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ವಾದ-ವಿವಾದವನ್ನ ಆಲಿಸಿದ ಉಪನಿಬಂಧಕರು ಏಳು ತಿಂಗಳ ನಂತರ ನೋಂದಾವಣೆಗೊಂಡ ಸಂಘವನ್ನು ರದ್ದುಗೊಳಿಸಿ ಆದೇಶ ನೀಡಿದ್ದಾರೆ.

ಇಂತಹ ಪ್ರಕರಣಗಳು ಸಹಕಾರಿ ಸಂಘದಲ್ಲಿ ಇದ್ದು, ಒಂದೇ ಹೆಸರಿನಲ್ಲಿ ಎರಡು ಹೆಸರುಗಳನ್ನು ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಆದೇಶ ಮಹತ್ವ ಪಡೆದಿದ್ದು, ಕಲಂ ಏಳ ಮಹತ್ವವನ್ನು ಇದು ಒತ್ತಿ ಹೇಳಿದೆ ಎಂದು ಅಭಿಪ್ರಾಯ ಪಡಲಾಗಿದೆ. ಉತ್ತರ ಕನ್ನಡ ಅಮೆಚೂರು ಕಬ್ಬಡಿ ಎಸೋಸಿಯೇಷನ್ ಪರವಾಗಿ ಅಧ್ಯಕ್ಷರಾದ ಮಂಜುನಾಥ ನಾಯ್ಕ್, ಕಾರ್ಯದರ್ಶಿ ಅನಿಲ್ ಕುಮಾರ್, ಉಪಾಧ್ಯಕ್ಷ ವಾಸು ಎಲ್ ನಾಯ್ಕ್, ಸಂಘಟನಾ ಕಾರ್ಯದರ್ಶಿ ಗಜ ನಾಯ್ಕ್ ಪ್ರತಿನಿಧಿಸಿದ್ದರು. ಉತ್ತರ ಕನ್ನಡ ಅಮೆಚೂರು ಕಬ್ಬಡಿ ಎಸೋಸಿಯೇಶನ್ ಪರವಾಗಿ ಐಪಿ ನ್ಯಾಯವಾದಿ ನವನೀತ್.ಡಿ. ಹಿ0ಗಾಣಿ ಮಂಗಳೂರು ಹಾಗೂ ಹೈಕೋರ್ಟ್ ನ್ಯಾಯವಾದಿ ನಾಗೇಂದ್ರ ನಾಯ್ಕ್ ಭಟ್ಕಳ ಕಾನೂನು ಸಲಹೆ ಸೂಚನೆಗಳನ್ನು ನೀಡಿದ್ದರು.

Advertisement
Next Article