ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

--ಒಕ್ಕಲಿಗ ಮುದ್ದಣ್ಣ ಅವರ ವಚನ ……

07:30 AM Mar 10, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕ್ರೋಧ ಬಂದಲ್ಲಿ ಕೊಲ್ಲೆಂಬುದು,

ದಯೆ ಬಂದಲ್ಲಿ ಬೇಡಾ ಎಂಬುದು,

ಅದು ಅರಿವೊ? ಅಜ್ಞಾನವೊ? ಬೇರೊಂದು ಹೊಲಬೊ?

ಮಾಡುವ ಕ್ರೀ ಜಡನೆಂಬುದು, ಕ್ರೀ ಹೊರಗಾದುದು ಅರಿವೆಂಬುದು,

ಅದನರಿವುದು ಅದೇನು ಹೇಳಾ?

ಆತ್ಮನರಿವೊ ಅದೇನು ಮರವೆಯೊ?

ತೊಳೆದಡೆ ಮಡಿಯಾಗಿ ಮಾಸಿದಡೆ ಮೈಲಿಗೆಯಾಗಿ

ಪುಸಿಯಹುದೊಂದೊ ಎರಡೊ?

ಅರಿದಡೆ ತಾನೆಂಬ ಮರೆದಡೆ ಜಗವೆಂಬ

ಉಭಯಕ್ಕೊಳಗಾಗದ ಮುನ್ನವೆ ಅರಿ, ಕಾಮಭಿೀಮ ಜೀವಧನದೊಡೆಯನ.

 

-ಒಕ್ಕಲಿಗ ಮುದ್ದಣ್ಣ

Tags :
--- ಒಕ್ಕಲಿಗ ಮುದ್ದಣ್ಣ ಅವರ ವಚನ .!
Advertisement
Next Article