For the best experience, open
https://m.bcsuddi.com
on your mobile browser.
Advertisement

'ಕಡೆಗಣಿಸು ,ನಿರ್ಲಕ್ಷಿಸು. ನಿದ್ರಿಸು,ಪುನರಾವರ್ತಿಸು ಇದು ಮೋದಿ ಮಂತ್ರ' - ಸಿಎಂ ಕಿಡಿ

11:50 AM Jan 17, 2024 IST | Bcsuddi
 ಕಡೆಗಣಿಸು  ನಿರ್ಲಕ್ಷಿಸು  ನಿದ್ರಿಸು ಪುನರಾವರ್ತಿಸು ಇದು ಮೋದಿ ಮಂತ್ರ    ಸಿಎಂ ಕಿಡಿ
Advertisement

ಬೆಂಗಳೂರು : "ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ" ಎಂದು ಪ್ರಧಾನಿ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

ಕೆಲ ವ್ಯಂಗ್ಯ ಚಿತ್ರಗಳನ್ನು ಎಕ್ಸ್ ಮಾಡಿರುವ ಅವರು, ಪ್ರಧಾನಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ಅಣಕವಾಡಿದ್ದಾರೆ.

"ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲಮೋದಿ ಮಂತ್ರವಿಷ್ಟೇ ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು!" ಎಂದು ಸರಣಿಯಾಗಿ ಆರೋಪ ಮಾಡಿದ್ದಾರೆ

Advertisement

"ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು! ಇದು ಬಿಜೆಪಿ ಸಂಸದರ ಮಂತ್ರವಾಗಿದೆ" ಎಂದು ಕುಹಕವಾಡಿದ್ದಾರೆ.

"ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು" ಎಂದು ಸಿಎಂ ಬರೆದುಕೊಂಡಿದ್ದಾರೆ.

Author Image

Advertisement