ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ.!
07:45 PM Mar 12, 2024 IST
|
Bcsuddi
Advertisement
Advertisement
ತುಮಕೂರು: ಜಿ.ಎಸ್.ಟಿ ಹಣ ಕಡಿತಗೊಳಿಸಲು ತುಮಕೂರಿನ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಮಂಜುನಾಥ್ ವಿ.ಕೆ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ. ಇವರು ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು ಜಿ.ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್ ಮಾಡಿದ್ದಾರೆ.
Next Article