For the best experience, open
https://m.bcsuddi.com
on your mobile browser.
Advertisement

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ : ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

08:06 AM Aug 10, 2024 IST | BC Suddi
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ   ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ 2024-25ನೇ ಸಾಲಿನ ವಿವಿಧ ಯೋಜನೆಯಡಿ ಅನುಕೂಲವಾಗುವಂತೆ  ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಈ ಯೋಜನೆಯಡಿಯಲ್ಲಿ  ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣೀಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ಈ  ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in      ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ, ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೆöÊಟ್  www.kmmd.karnatak.gov.in    ಅಥವಾ ನಿಗಮದ ದೂರವಾಣಿ ಸಂಖ್ಯೆ 080-22374832, 850770004 ಮತ್ತು 8050770005 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.

Tags :
Author Image

Advertisement