ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಲುಷಿತ ನೀರು ಕುಡಿದು ನವ ಜಾತ ಶಿಶು ಸೇರಿ ಐವರು ಸಾವು

10:29 AM Oct 23, 2024 IST | BC Suddi
Advertisement

ದಾವಣಗೆರೆ : ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಸಾವನ್ನಪ್ಪಿರುವ ಶಂಕೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38), 8 ತಿಂಗಳ ಗಂಡು ಮಗು ಸಾವನ್ನಪ್ಪಿದವರು.

ಗ್ರಾಮದ ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಂತಿ ಭೇದಿಯಿಂದ ನರಳಿ ಚಿಕಿತ್ಸೆ ಫಲಕಾರಿಯಾಗದೇ ಈ ಸಾವುಗಳು ಸಂಭವಿಸುತ್ತಿದೆ ಎಂದು ಗ್ರಾಮಸ್ಥರ ಆರೋಪಿಸುತ್ತಿದ್ದಾರೆ. ಅಲ್ಲದೆ ಗರ್ಭಿಣಿ ನಿಂಗಮ್ಮ ಎನ್ನುವವರಿಗೆ ಕೂಡ ವಾಂತಿಭೇದಿ ಕಾಣಿಸಿಕೊಂಡಿದ್ದು, ಹೆರಿಗೆ ವೇಳೆ ಗಂಡು ಮಗು ಕೂಡ ಸಾವನ್ನಪ್ಪಿದೆ. ಇದಕ್ಕೆ ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಬಂದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.

 

Advertisement
Next Article