ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕುಡಿಯುವ ನೀರು: ಅಗತ್ಯದ ಹಣ ಬಿಡುಗಡೆಗೆ ಸಿಎಂ ಸೂಚನೆ
03:27 PM Nov 03, 2023 IST
|
Bcsuddi
Advertisement
ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ತಕ್ಷಣ ಅಗತ್ಯವಿದ್ದಷ್ಟು ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ದೂರವಾಣಿ ಮೂಲಕ ಸ್ಪಷ್ಟ ಸೂಚನೆ ನೀಡಿದರು.
Advertisement
ಬರಗಾಲ ಮತ್ತು ಪರಿಣಾಮಗಳ ಬಗ್ಗೆ ತೀವ್ರ ನಿಗಾ ಇಡಬೇಕು. ನರೇಗಾ ಹಣ ಬಿಡುಗಡೆ ತಡವಾದರೂ ನಮ್ಮಂದಲೇ ಹಣ ಬಿಡುಗಡೆ ಮಾಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಡ ಮಾಡಬಾರದು ಎನ್ನುವ ಸೂಚನೆಗಳನ್ನು ನೀಡಿದ್ದಾರೆ.
ಸಚಿವರಾದ ಬೈರತಿ ಸುರೇಶ್, ಶಿವರಾಜ ತಂಗಡಗಿ, ಶಾಸಕರಾದ ಗವಿಯಪ್ಪ, ಡಾ.ಶ್ರೀನಿವಾಸ್ ಅವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Article