For the best experience, open
https://m.bcsuddi.com
on your mobile browser.
Advertisement

'ಕಳ್ಳರು ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚಿಸಿಕೊಂಡಿದ್ದಾರೆ'- ಸ್ನೇಹಮಯಿ ಕೃಷ್ಣ

04:16 PM Oct 04, 2024 IST | BC Suddi
 ಕಳ್ಳರು ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚಿಸಿಕೊಂಡಿದ್ದಾರೆ   ಸ್ನೇಹಮಯಿ ಕೃಷ್ಣ
Advertisement

ಮೈಸೂರು: ಕಳ್ಳರು ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ. ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ವ್ಯಂಗ್ಯವಾಡಿದ್ದಾರೆ.

ಲೋಕಾಯುಕ್ತ ಕಚೇರಿ ಬಳಿ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡರ ವಿಚಾರವಾಗಿ ಮಾತನಾಡಿದ ಅವರು, ಜಿಟಿಡಿ ಸಹ 50:50 ಅನುಪಾತದ ಫಲಾನುಭವಿಯಾಗಿದ್ದಾರೆ. ಅವರಿಗೂ ತನಿಖೆಯ ಭಯ ಶುರುವಾಗಿದೆ. ಅದೇ ಕಾರಣಕ್ಕೆ ಭಯದಿಂದ ಹೀಗೆ ಮಾತಾಡ್ತಿದ್ದಾರೆ. ಮತ್ತೊಂದಿಷ್ಟು ಕಳ್ಳರು ಮುಂದಿನ ದಿನಗಳಲ್ಲಿ ಇದೇ ರೀತಿ ಮಾತಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಟಿಡಿ 3 ತಿಂಗಳಿನಿಂದ ಏನು ಮಾಡುತ್ತಿದ್ದರು? ದಸರಾದಂತ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು. ಮುಡಾದಲ್ಲಿ ಜಿ.ಟಿ ದೇವೇಗೌಡರ ಅಕ್ರಮ ಇರಬಹುದು. ಆ ಕಾರಣಕ್ಕೆ ಎಲ್ಲರೂ ಒಂದಾಗಿದ್ದಾರೆ. ಆ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Advertisement

Author Image

Advertisement