ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗಕ್ಕೆ ನೂತನ ನೇಮಕ.!

05:05 PM Oct 23, 2024 IST | BC Suddi
Advertisement

 

Advertisement

ಚಿತ್ರದುರ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬರ್ರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗಕ್ಕೆ ನೇಮಕಗೊಂಡಿರುವವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನೇಮಕ ಪತ್ರಗಳನ್ನು ವಿತರಿಸಲಾಯಿತು.

ಹೊಳಲ್ಕೆರೆ ಗ್ರಾಮಾಂತರ ಅಧ್ಯಕ್ಷರಾಗಿ ರಶೀದ್ ಡಿ. ಹೊಳಲ್ಕೆರೆ ನಗರಾಧ್ಯಕ್ಷರಾಗಿ ಅಲ್ಲಾಭಕ್ಷ್ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಅಬ್ದುಲ್ ಫಾರೂಖ್, ಮಹಮದ್ ಇರ್ಫಾನ್(ಪಟೇಲ್) ಫ್ರಾನ್ಸಿಸ್ ಅರುಣ್ ಡಿಸೋಜ, ಕಾರ್ಯದರ್ಶಿಯಾಗಿ ಮಹಮದ್ ಉಸ್ಮಾನ್ ಇವರುಗಳನ್ನು ನೇಮಕಗೊಳಿಸಲಾಗಿದೆ.

ನೇಮಕ ಪತ್ರಗಳನ್ನು ವಿತರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯೋಜನೆಗಳನ್ನು ಜಿಲ್ಲೆಯಾದ್ಯಂತ ಮನೆ ಮನೆಗೆ ತಲುಪಿಸಿ ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ ಪಕ್ಷದಲ್ಲಿ ಯಾವುದೇ ಸ್ಥಾನಮಾನಗಳನ್ನು ಪಡೆಯುವುದು ಮುಖ್ಯವಲ್ಲ. ಪಕ್ಷ ಸಂಘಟನೆಗಾಗಿ ಅವಿರತ ಶ್ರಮಿಸುವಂತೆ ಅಲ್ಪಸಂಖ್ಯಾತ ವಿಭಾಗಕ್ಕೆ ನೇಮಕಗೊಂಡವರಿಗೆ ತಿಳಿಸಿದರು.

ಪ್ರಕಾಶ್ರಾಮನಾಯ್ಕ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags :
ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗಕ್ಕೆ ನೂತನ ನೇಮಕ.!
Advertisement
Next Article