ಕಾಂಗ್ರೆಸ್ ಪಕ್ಷಕ್ಕೆ ಮೂರನೇ ಹೊಡೆತ: ಪುರಿ ಕ್ಷೇತ್ರದ ಕೈ ಅಭ್ಯರ್ಥಿ ಸುಚರಿತ ಮೊಹಂತಿ ಕಣದಿಂದ ಹೊರಕ್ಕೆ
05:38 PM May 04, 2024 IST | Bcsuddi
Advertisement
ಭುವನೇಶ್ವರ: ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪುರಿ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಿಂತಿರುಗಿಸುವ ಮೂಲಕ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಂತಿ ಅವರು, 'ಚುನಾವಣೆಗೆ ಖರ್ಚು ಮಾಡಲು ಹಣದ ಕೊರತೆ ಇದೆ. ಹೀಗಾಗಿ ನಾನು ಕ್ಷೇತ್ರದ ಟಿಕೆಟ್ ಅನ್ನು ಹಿಂದಿರುಗಿಸುತ್ತಿದ್ದೇನೆ' ಎಂದಿದ್ದಾರೆ.
Advertisement
ಪಕ್ಷದ ನಿಧಿಯಿಲ್ಲದೆ ಪುರಿಯಲ್ಲಿ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ನಾನು ವಿಷಾದಿಸುತ್ತೇನೆ. ಹೀಗಾಗಿ, ಪುರಿ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ನಾನು ಈ ಮೂಲಕ ಹಿಂದಿರುಗಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.