ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್ಗೆ ಯಾವುದೇ ಅನ್ಯಾಯ ಆಗಿಲ್ಲ -ಸಿಎಂ ಸಿದ್ದರಾಮಯ್ಯ
04:00 PM Jan 25, 2024 IST
|
Bcsuddi
Advertisement
ಕೊಡಗು : ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್ಗೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊಡಗಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್ಸಿ ಮಾಡಿದ್ದೆವು.
Advertisement
ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ. ಇನ್ನು ನಿಗಮ ಮಂಡಳಿ ನೇಮಕ ವಿಚಾರ ಸಂಬಂಧ ಮಾತನಾಡಿದ ಸಿಎಂ, ನಾವೇನು ಗುಲಾಮರಾ ಎಂಬ ಸಚಿವ ಕೆ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ವೊಬ್ಬರು ಒಂದೊಂದು ಹೆಸರನ್ನ ಸಜೆಸ್ಟ್ ಮಾಡ್ತಾರೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ತಿಳಿಸಿದ್ದಾರೆ.
Next Article