For the best experience, open
https://m.bcsuddi.com
on your mobile browser.
Advertisement

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಖರ್ಗೆ ಪತ್ರ

05:21 PM Apr 25, 2024 IST | Bcsuddi
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಖರ್ಗೆ ಪತ್ರ
Advertisement

ನವದೆಹಲಿ: ಕಾಂಗ್ರೆಸ್ ಪ್ರಣಾಳಿಕೆ ‘ನ್ಯಾಯ ಪತ್ರ’ ಬಗ್ಗೆ ವಿವರಿಸಲು ವೈಯಕ್ತಿಕ ಭೇಟಿಗೆ ಸಮಯಾವಕಾಶ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲದ ವಿಷಯಗಳ ಬಗ್ಗೆ ಸಲಹೆಗಾರರು ಮೋದಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಎರಡು ಪುಟಗಳ ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.

ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇ ರಿದಂತೆ ಜಾತಿ ಮತ್ತು ಸಮುದಾಯಗಳಲ್ಲಿ ಮೂಲೆ ಗುಂಪಾದವರಿಗೆ ನ್ಯಾಯ ಒದಗಿಸುವ ಗುರಿಯನ್ನು ಕಾಂಗ್ರೆಸ್ ಪ್ರಣಾಳಿಕೆ ಹೊಂದಿದೆ ಎಂ ದು ಹೇಳಿದ್ದಾರೆ.

Advertisement

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ನಿಮ್ಮ ಸಲಹೆಗಾರರು ನಿಮಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದ್ದರಿಂದ ಪ್ರಣಾಳಿಕೆಯನ್ನು ವಿವರಿಸಲು ನಿಮ್ಮನ್ನು ವೈಯಕ್ತಿಕವಾಗಿ ಭೇ ಟಿಯಾಗಲು ನಾನು ಬಯಸುತ್ತೇನೆ. ದೇಶದ ಪ್ರಧಾನಿಯಾಗಿದ್ದರಿಂ ದ ಜನರಿಗೆ ನೀ ವು ತಪ್ಪು ಮಾಹಿತಿ ಹಂಚಿಕೊಳ್ಳಬಾರದು ಎಂದು ಖರ್ಗೆ ತಿಳಿಸಿದ್ದಾರೆ.

Author Image

Advertisement