ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ
09:38 AM Apr 17, 2024 IST
|
Bcsuddi
Advertisement
ಬೆಂಗಳೂರು : ಕಾಂಗ್ರೆಸ್ ಮುಖಂಡರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೆಲಮಂಗಲ ನಗರದ ಅರಿಶಿನಕುಂಟೆಯ ಮನೆ ಮೇಲೆ ದಾಳಿ ನಡೆದಿದೆ.
Advertisement
ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೆಂಕಟ್ ರಾಜು ಮನೆಗೆ ಸುಮಾರು 20 ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ನೆರವಿನೊಂದಿಗೆ ಕಾರ್ಯಚರಣೆ ನಡೆಯುತ್ತಿದ್ದು, ಮನೆಯಲ್ಲಿ ಅಧಿಕಾರಿಗಳುಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹಣ ರವಾನೆಯಾಗಿದೆ ಎಂಬ ಅನುಮಾನದಲ್ಲಿ ಈ ಪರಿಶೀಲನೆ ನಡೆದಿದೆ. ಸಾಕಷ್ಟು ದಾಖಲೆಗಳ ಪರಿಶೀಲನೆ ಹಣ ವಹಿವಾಟಿನ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ
Next Article