ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾರು ಸೇತುವೆಗೆ ಡಿಕ್ಕಿ; ಮಕ್ಕಳು ಸೇರಿದಂತೆ ನಾಲ್ವರ ಸಾವು.!

11:16 AM Jan 25, 2024 IST | Bcsuddi
Advertisement

 

Advertisement

ಚಿತ್ರದುರ್ಗ; ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಿಳಿ ನಡೆದಿದೆ.

ಮೃತ 2 ವರ್ಷದ ಸಿಂಧುಶ್ರೀ, 5 ತಿಂಗಳ ಹಸುಗೂಸು  ಅಯ್ಯಾಳಪ್ಪ, 3 ತಿಂಗಳ ಹಸುಗೂಸು ರಕ್ಷಾ‌ ಮತ್ತು 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ‌.

Advertisement
Next Article