ಕುಂದಾಪುರ: ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ದೇವಸ್ಥಾನದ ಕೆರೆಯಲ್ಲಿ ಪತ್ತೆ
06:14 PM Nov 06, 2023 IST | Bcsuddi
Advertisement
ಕುಂದಾಪುರ: ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹವು ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿ.ಸುರೇಂದ್ರ(70) ಎಂದು ಗುರುತಿಸಲಾಗಿದೆ. ಇವರು ಅನಾರೋಗ್ಯದಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು ಬಳಿಕ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಡಿದರೂ ಅವರು ಪತ್ತೆಯಾಗಿರಲಿಲ್ಲ.ಕೊನೆಗೆ ಕೋಟೇಶ್ವರ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಇವರು ವೈಯಕ್ತಿಕ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.