ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆ ಹೃದಯಾಘಾತದಿಂದ ಸಾವು

12:17 PM Nov 29, 2023 IST | Bcsuddi
Advertisement

ಸುಬ್ರಹ್ಮಣ್ಯ  : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಬೆಂಗಳೂರಿನ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಎಂ.ವಿ. ಗಾರ್ಡನ್‌ ನಿವಾಸಿ ಲಕ್ಷ್ಮೀ (32) ಎಂದು ಗುರುತಿಸಲಾಗಿದೆ.

Advertisement

ಶಿವಕುಮಾರ್‌ ಅವರು ಪತ್ನಿ, ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಲಕ್ಷ್ಮೀ ಹಾಗೂ ಮಕ್ಕಳು ಸಂಬಂಧಿಕರ ಜತೆ ಧರ್ಮಸ್ಥಳಕ್ಕೆ ತೆರಳಿ ರವಿವಾರ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು.

ಕೂಡಲೇ ಚಿಕಿತ್ಸೆಗೆ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರದೊಯ್ದಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Next Article