For the best experience, open
https://m.bcsuddi.com
on your mobile browser.
Advertisement

ಕುರಿಗಾಹಿಗಳ ರಕ್ಷಣೆಗೆ ಬಂದೂಕಿನ ಲೈಸೆನ್ಸ್: ಸಿದ್ದರಾಮಯ್ಯ.!

07:47 AM Jun 26, 2024 IST | Bcsuddi
ಕುರಿಗಾಹಿಗಳ ರಕ್ಷಣೆಗೆ ಬಂದೂಕಿನ ಲೈಸೆನ್ಸ್  ಸಿದ್ದರಾಮಯ್ಯ
Advertisement

ಬೆಂಗಳೂರು:  ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಂಚಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆಗಿನ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

Advertisement

ಕುರಿ ಕಳ್ಳತನ ಪ್ರಕರಣಗಳ ಕುರಿತು ಯಾವುದೇ ಠಾಣೆಗೆ ದೂರು ಬಂದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಯಿತು. ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು. ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಸೂಚಿಸಲಾಯಿತು. ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು. ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ವೈದ್ಯರು ಬಂದು ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು. ಅನುಗ್ರಹ ಯೋಜನೆಯಡಿ ಒಂದು ಕುರಿ ಆಕಸ್ಮಿಕವಾಗಿ ಮರಣ ಹೊಂದಿದರೆ 5 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು.

ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡಬಾರದೆಂದು ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಗೋಮಾಳಗಳ ರಕ್ಷಣೆ ಮಾಡಲಾಗುವುದು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕುರಿಗಳ ಅಭಿವೃದ್ಧಿ, ಕುರಿಗಾಹಿಗಳ ಭದ್ರತೆ, ಕುರಿ ವ್ಯಾಪಾರಕ್ಕೆ ನೆರವು, ಮಾರುಕಟ್ಟೆ ವಿಸ್ತರಣೆಗೆ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

Facebook

Tags :
Author Image

Advertisement