For the best experience, open
https://m.bcsuddi.com
on your mobile browser.
Advertisement

ಕೆಫೆ ಬಾಂಬ್ ಪ್ರಕರಣ; 'ಐವರ ಬಂಧನ'- ಸಿಎಂ ಮಾಹಿತಿ

10:43 AM Mar 06, 2024 IST | Bcsuddi
ಕೆಫೆ ಬಾಂಬ್ ಪ್ರಕರಣ   ಐವರ ಬಂಧನ   ಸಿಎಂ ಮಾಹಿತಿ
Advertisement

ಬನವಾಸಿ: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಐವರನ್ನು ಬಂಧಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬನವಾಸಿಯಲ್ಲಿ ನಡೆದ ಕದಂಬೋತ್ಸವದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಹಾಗೂ ಎನ್ ಐಎ ನಡೆಸುತ್ತಿದ್ದು, ತನಿಖೆ ಚುರುಕುಗೊಂಡಿದೆ. ಸ್ಪೋಟಕ್ಕೆ ಸಂಬಂಧಿಸಿದ ಕೆಲ ಸುಳಿವುಗಳು ದೊರೆತಿವೆ. ರಾಷ್ಟ್ರೀಯ ತನಿಖಾ ದಳದ ತಂಡ ಐವರನ್ನು ಬಂಧಿಸಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದಿದ್ದಾರೆ.

ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಭಂದಿಸಿದಂತೆ ಎನ್ ಐಎ ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡಿದೆ. ಕೆಲ ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಸಹ ಎನ್ ಐಎ ಕಾರ್ಯಾಚರಣೆ ನಡೆಸಿದೆ. ಪ್ರಕರಣವನ್ನು ಅಧಿಕೃತವಾಗಿ ಎನ್ ಐಎಗೆ ವಹಿಸಿಕೊಂಡಿದ್ದು, ಸ್ಪೋಟದ ಕುರಿತು ಸ್ಥಳೀಯ ಪೊಲೀಸರಿಂದ ಅಧಿಕಾರಿಗಳ ತಂಡ ಮಾಹಿತಿ ಪಡೆದಿದೆ.

Advertisement

Author Image

Advertisement